ಇಂಧನ ದರ ಏರಿಕೆಗೆ ಆಕ್ರೋಶ: ಆಟೋ ರಿಕ್ಷಾಗೆ ಹಗ್ಗ ಕಟ್ಟೆ ಎಳೆದ ಕಾಂಗ್ರೆಸ್ ಸಂಸದ ಶಶಿ ತರೂರ್..!
2586 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಕೇರಳದಲ್ಲೂ ಕಾಂಗ್ರೆಸ್ ನಾಯಕರು ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್, ಕೇರಳದ ತಿರುವನಂತಪುರಂನಲ್ಲಿ ಆಟೋ ರಿಕ್ಷಾವನ್ನು ಹಗ್ಗದಲ್ಲಿ ಕಟ್ಟಿ ಎಳೆದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಶಶಿ ತರೂರ್ ಅವರ ಜೊತೆ ನೂರಾರು ಪ್ರತಿಭಟನಾಕಾರರು ಹಾಗೂ ಆಟೋಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು.