ಲ್ಯಾಂಡರ್ ಇಳಿಕೆ ಇಷ್ಟು ದೊಡ್ಡ ಸವಾಲು ಏಕೆ?
1487 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-೩ ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಬುಧವಾರ ಅಮದರೆ ಇಂದು ಸಂಜೆ ೬.೦೪ ನಿಮಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ. ತನ್ಮೂಲಕ ಅಲ್ಲಿಗೆ ತಲುಪಿದ ಮೊದಲ ದೇಶ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ. ಯೋಜನೆಯ ಹೊಣೆ ಹೊತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ೧೪೦ ಕೋಟಿ ಭಾರತೀಯರ ಜೊತೆ ಈ ರೋಚಕ ಕ್ಷಣಕ್ಕಾಗಿ ಉಸಿರು ಬಿಗಿಹಿಡಿದು ಕಾಯುತ್ತಿದ್ದರೆ, ಇಡೀ ವಿಶ್ವ ಭಾರತದತ್ತ ಕುತೂಹಲದ ದೃಷ್ಟಿ ನೆಟ್ಟಿದೆ. ಲ್ಯಾಂಡರ್ ಇಳಿಕೆ ಇಷ್ಟು ದೊಡ್ಡ ಸವಾಲು ಏಕೆ? ಅನ್ನುವುದನ್ನ ನೋಡುವುದಾದರೆ ಚಂದ್ರನಿಂದ ೩೦ ಕಿ.ಮೀ ಎತ್ತರದಲ್ಲಿ ಹಾರುತ್ತಿದ್ದಾಗ ವಿಕ್ರಂ ಲ್ಯಾಂಡರ್ ಅಡ್ಡಲಾಗಿ ಇರುತ್ತದೆ, ಆದರೆ ಕೆಳಕ್ಕಿಳಿಯುವಾಗ ಲ್ಯಾಂಡರ್ ನೇರಗೊಳ್ಳಬೇಕಾಗುತ್ತದೆ.ಇದು ಅತ್ಯಂತ ಕ್ಲಿಷ್ಟವಾದ ಪ್ರಕ್ರಿಯೆಯಾಗಿರುತ್ತದೆ. ಇನ್ನು ಲ್ಯಾಂಡರ್ ೪ ಎಂಜಿನ್ ಬಳಸಿ ವೇಗ ತಗ್ಗಿಸಿ, ಇತರೆ ೮ ಎಂಜಿನ್ ಬಳಸಿ ದಿಕ್ಕು ಬದಲಿಸಬೇಕು. ಎಂಜಿನ್, ಇಂಧನ ಬಳಕೆ, ದೂರ ಲೆಕ್ಕಾಚಾರ, ಎಲ್ಲ ಉಪಕರಣಗಳ ಸುಸ್ಥಿತಿ ಪಕ್ಕಾ ಆಗಿರಬೇಕು. ೨ ರೀತಿಯ ಬ್ರೇಕಿಂಗ್, ಲ್ಯಾಂಡಿಂಗ್ ಸ್ಥಳ ಪರಿಶೀಲನೆ ಬಳಿಕ ಅಂತಿಮವಾಗಿ ನೆಲಕ್ಕಿಳಿಯಬೇಕು. ಯಾವುದೇ ಹಂತದಲ್ಲಿ ತುಸು ವ್ಯತ್ಯಾಸ ಉಂಟಾದರೂ ಲ್ಯಾಂಡಿಂಗ್ ಪ್ರಕ್ರಿಯೆ ಬುಡಮೇಲಾಗುವ ಸಾಧ್ಯತೆಗಳಿವೆ. ಹೀಗಾಗಿಯೇ ಈ ಪ್ರಕ್ರಿಯೆಯನ್ನು ಇಸ್ರೋ ಆತಂಕದ ೧೭ ನಿಮಷ ಎಂದು ಬಣ್ಣಿಸಿದೆ. ಕೋಟ್ಯಂತರ ಭಾರತೀಯರ ಹಾರೈಕೆಗಳೊಂದಿಗೆ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲಿ ಎಂದು ಪ್ರಾರ್ಥಿಸಿ ವಿವಿಧ ದೇಗುಲಗಳಲ್ಲಿ ಮಂಗಳವಾರ ವಿಶೇಷ ಪೂಜೆ, ಹೋಮ ಹವನ ನಡೆದಿದೆ. ಇನ್ನು ೧೫ ನೇ ಬ್ರಿಕ್ಸ್ ಶೃಂಗಕ್ಕಾಗಿ ದಕ್ಷಿಣ ಆಫ್ರೀಕಾಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚಂದ್ರಯಾನ ೩ ಸಾಫ್ಟ್ ಲ್ಯಾಂಡಿಂಗ್ನ ಐತಿಹಾಸಿಕ ಕ್ಷಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ.