ಒಡಿಶಾ ರೈಲ್ವೇ ದುರಂತದಲ್ಲಿ ಸಿಲುಕಿದ ಕನ್ನಡಿಗರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ!<b>ಬೆಂಗಳೂರು: </b>ಒಡಿಶಾ ರೈಲು ದುರಂತದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಒಡಿಶಾದ ಬಾಲಸೋರ್ ರೈಲು ದುರಂತದ ಸ್ಥಳದಲ್ಲಿ ಸಿಲುಕಿದ್ದ 30 ಕ್ಕೂ ಹೆಚ್ಚು ಮಂದಿ ಕನ್ನಡಿಗರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧೂರವಾಣಿ ಮೂಲಕ ಮಾತನಾಡಿದರು. ಈ ವೇಳೆ ಅಗತ್ಯ ನೆರವನ್ನು ಒದಗಿಸಿ, ಸುರಕ್ಷಿತವಾಗಿ ವಾಪಾಸ್ ಕರೆ ತರಲಾಗುವುದು ಎಂದು ಧೈರ್ಯ ತುಂಬಿದರು.